ಅತ್ಯಾಚಾರ ಆರೋಪಿ, ಬಿಜೆಪಿ ಮುಖಂಡನಿಗೆ ಸಂತ್ರಸ್ತೆಯ ಹೇಳಿಕೆಯ ಪ್ರತಿ ನೀಡಲು `ಸುಪ್ರೀಂ’ ನಿರಾಕರಣೆ
ಹೊಸದೆಹಲಿ(08/10/2020): ಕಾನೂನು ಕಾಲೇಜಿನ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯು ನ್ಯಾಯಾಧೀಶರಿಗೆ ನೀಡಿರುವ ಹೇಳಿಕೆಯ ಪ್ರತಿಯನ್ನು ಪಡೆಯಲು ಆರೋಪಿ, ಬಿಜೆಪಿ ಮುಖಂಡ ಚಿನ್ಮಯಾನಂದ ಅವರಿಗೆ ಸುಪ್ರೀಂ ಕೋರ್ಟ್ ಅವಕಾಶವನ್ನು ನಿರಾಕರಿಸಿದೆ. ಈ ಕುರಿತ ಅಲಹಾಬಾದ್ ಹೈಕೋರ್ಟ್ ನೀಡಿದ್ದ ಆದೇಶವನ್ನು ರದ್ದುಗೊಳಿಸಿದೆ. ಹೈಕೋರ್ಟ್, 2019ರ ನ.7ರಂದು ಸಂತ್ರಸ್ತೆಯ ಹೇಳಿಕೆಯ ಪ್ರತಿಯನ್ನು ಆರೋಪಿಗೆ ನೀಡುವಂತೆ ವಿಚಾರಣಾ ನ್ಯಾಯಾಲಯಕ್ಕೆ ಸೂಚಿಸಿತ್ತು. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ವಿದ್ಯಾರ್ಥಿನಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಈ ಆದೇಶಕ್ಕೆ ಕಳೆದ ವರ್ಷ ನವೆಂಬರ್ 15ರಂದು ಸುಪ್ರೀಂ … Read more