ಪುತ್ತೂರು(28-11-2020): ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಪರ್ಲಡ್ಕ ನಿವಾಸಿ ಯುವಕ ಮೃತಪಟ್ಟಿದ್ದಾರೆ.
ಪುತ್ತೂರು ನಗರದ ಬೈಪಾಸ್ ತೆಂಕಿಲ ಎಂಬಲ್ಲಿ ಬೈಕ್ ಮತ್ತು ಜೀಪಿನ ಮಧ್ಯೆ ನಿನ್ನೆ ರಾತ್ರಿ ಅಪಘಾತವಾಗಿತ್ತು. ಈ ವೇಳೆ ಬೈಕ್ ನಲ್ಲಿದ್ದ ಮುಹಮ್ಮದ್ ಹಾಶೀಂ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.