ಬೆಂಗಳೂರು(02-10-2020): ಕೆಆರ್ ಪುರಂ ಬಳಿಯ ಭಟ್ಟರಹಳ್ಳಿಯಲ್ಲಿ ಎಟಿಎಂ ಯಂತ್ರವನ್ನು ಧ್ವಂಸ ಮಾಡಿ 11 ಲಕ್ಷ ರೂ.ದೋಚಿರುವ ಘಟನೆ ನಡೆದಿದೆ .
ಖಾಸಗಿ ಬ್ಯಾಂಕ್ ನ ಎಟಿಎಂ ಯಂತ್ರವನ್ನು ಗ್ಯಾಸ್ ಕಟರ್ ಬಳಸಿ ಕತ್ತರಿಸಿರುವ ಕಳ್ಳರು ಅದರಲ್ಲಿದ್ದ ಹಣವನ್ನು ದೋಚಿದ್ದಾರೆ. ತಡರಾತ್ರಿ ಘಟನೆ ನಡೆದಿದೆ.
ಸ್ಥಳಕ್ಕೆ ಪೊಲೀಸರು ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.