ಮುಂಬೈ(08-07-2021): ಮಹಾರಾಷ್ಟ್ರದ ಸೊಲಾಪುರದಲ್ಲಿ ಶಿವಸೇನೆ ಪಕ್ಷದ ಕಾರ್ಯಕರ್ತರು ಬಿಜೆಪಿ ನಾಯಕನೊಬ್ಬನ ಮೇಲೆ ಕಪ್ಪು ಮಸಿ ಎರಚಿ, ಸೀರೆ ತೊಡುವಂತೆ ಬಲವಂತ ಮಾಡಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಬಿಜೆಪಿ ನಾಯಕ ಶಿರೀಶ್ ಕಟೇಕರ್ ಮೇಲೆ ಶಿವಸೇನೆ ಕಾರ್ಯಕರ್ತರು ಮಸಿ ಬಳಿದಿದ್ದಾರೆ. ಶಿರೀಶ್ ಕಟೇಕರ್ ಮಹಾರಾಷ್ಟ್ರ ಸಿಎಂ ಉದ್ದವ್ ಠಾಕ್ರೆ ವಿರುದ್ಧ ವಿವಾದಾತ್ಮಕ ಹೇಳಿಕೆಯನ್ನು ಕೊಟ್ಟಿದ್ದರು.
ಈ ಕುರಿತು ಸೋಲಾಪುರ ಪೊಲೀಸ್ ಠಾಣೆಯಲ್ಲಿ 17 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ.
#WATCH I Maharashtra: Shiv Sena workers allegedly pour black ink on a BJP leader and forced him to wear a saree after the latter criticised Chief Minister Uddhav Thackeray, in Solapur pic.twitter.com/gdtL9gChT1
— ANI (@ANI) February 7, 2021