ಬೆಂಗಳೂರು(07-01-2021): ಕಾಂಗ್ರೆಸ್ ನಾಯಕ, ವಿಧಾನಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ಜೆಡಿಎಸ್ ಸೇರುವುದು ಬಹುತೇಖ ಖಚಿತವಾಗಿದೆ.
ಇಂದು ಬೆಂಗಳೂರಿನ ಪದ್ಮನಾಭನಗರದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ ಸಿ.ಎಂ. ಇಬ್ರಾಹಿಂ ಸಮಾಲೋಚನೆ ನಡೆಸಿದ್ದಾರೆ.
ಈ ಹಿಂದೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಎರಡು ಬಾರಿ ಇಬ್ರಾಹಿಂ ಅವರನ್ನು ಭೇಟಿಯಾಗಿ ಪಕ್ಷಕ್ಕೆ ಆಹ್ವಾನಿಸಿದ್ದರು. ಈ ಮೊದಲು ಕಾಂಗ್ರೆಸ್ ಮುಸ್ಲಿಮರನ್ನು ಕಡೆಗಣಿಸಿದೆ ಎಂಬ ಆರೋಪವನ್ನು ಸಿಎಂ ಇಬ್ರಾಹೀಂ ಮಾಡಿದ್ದರು. ಅವರು ಜೆಡಿಎಸ್ ಸೇರುವ ಬಗ್ಗೆ ಊಹಾಪೋಹಗಳು ಕೂಡ ಹಬ್ಬಿತ್ತು.
ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಸಿಎಂ ಇಬ್ರಾಹೀಂ ಅವರನ್ನು ನೇಮಕ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.