ಹೊಸದೆಹಲಿ(22/10/2020): ಕಳೆದ ಫೆಬ್ರವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದಿದ್ದ ಗಲಭೆ ದೇಶ ವಿಭಜನೆ ಬಳಿಕ ರಾಷ್ಟ್ರ ರಾಜಧಾನಿಯಲ್ಲಿ ನಡೆದ ಅತ್ಯಂತ ಕೆಟ್ಟ ಗಲಭೆ ಎಂದು ಹೆಚ್ಚುವರಿ ಸೆಷನ್ ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ಈ ಗಲಭೆಯು ದೇಶದ ಆತ್ಮಸಾಕ್ಷಿಯ ಮೇಲಿನ ಆಳವಾದ ಗಾಯವಾಗಿದೆ ಎಂದು ಕೋರ್ಟ್ ಹೇಳಿದೆ.
ಮಾಜಿ ಆಪ್ ಕೌನ್ಸಿಲರ್ ತಾಹಿರ್ ಹುಸೇನ್ ಅವರ ಜಾಮೀನು ಅರ್ಜಿ ವಿಚಾರಣೆಯ ವೇಳೆ ಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿದೆ.