ತಾಣೆ(06-02-2021): 20ರೂ.ಗಾಗಿ ಇಡ್ಲಿ ಮಾರಾಟ ಮಾಡುತ್ತಿದ್ದವನ ಕೊಲೆ ಮಾಡಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ತಾಣೆಯ ಮೀರಾ ರಸ್ತೆಯಲ್ಲಿ ನಡೆದಿದೆ.
ಮೂವರು ಗ್ರಾಹಕರು ವೀರೇಂದ್ರ ಯಾದವ್ ಅವರ ರಸ್ತೆ ಬದಿಯ ಕ್ಯಾಂಟೀನ್ ಗೆ ಬಂದರು, ಅಲ್ಲಿ ಅವರು ಇಡ್ಲಿಗಳನ್ನು ತಿಂದು 20ರೂ. ಉಳಿಸಿ ಇನ್ನೊಂದು ದಿನ ಕೊಡುವುದಾಗಿ ಹೇಳಿದ್ದಾರೆ. ಈ ವೇಳೆ ಆರೋಪಿಗಳು ಮತ್ತು ವೀರೇಂದ್ರ ಯಾದವ್ ನಡುವೆ ಜಗಳ ನಡೆದಿದೆ. ಈ ವೇಳೆ ಮೂವರು ಯಾದವ್ ನನ್ನು ತಳ್ಳಿದ್ದು ಆತ ಕೆಳಗೆ ಬಿದ್ದು ತಲೆಗೆ ಗಂಭೀರವಾಗಿ ಗಾಯಗೊಂಡಿದ್ದಾನೆ. ಇತರ ಜನರು ಅವನನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ಆತ ಮೃತಪಟ್ಟಿರುವ ಬಗ್ಗೆ ವೈದ್ಯರು ದೃಢಪಡಿಸಿದ್ದಾರೆ.
ನಂತರ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಮೀರಾ ರಸ್ತೆಯ ನಯಾ ನಗರ ಪೊಲೀಸ್ ಠಾಣೆಯಲ್ಲಿ ಮೂವರು ಆರೋಪಿಗಳ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ.