ಶ್ರೀನಗರ(30-10-2020): ಮೀಲಾದ್ ಪ್ರಾರ್ಥನೆಗೆ ಹಜರತ್ಬಾಲ್ ಮಸೀದಿಗೆ ಹೊರಟಿದ್ದ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರನ್ನು ಜಮ್ಮುಕಾಶ್ಮೀರದ ಆಡಳಿತ ತಡೆದಿರುವ ಘಟನೆ ನಡೆದಿದೆ.
ಪ್ರಾರ್ಥನೆ ಮಾಡುವುದು ನಮ್ಮ ಮೂಲಭೂತ ಹಕ್ಕಾಗಿದ್ದು, ಈಗ ಅದರ ಉಲ್ಲಂಘನೆಯಾಗಿದೆ ಎಂದು ನ್ಯಾಷನಲ್ ಕಾನ್ಫರೆನ್ಸ್ ಆಕ್ರೋಶವನ್ನು ವ್ಯಕ್ತಪಡಿಸಿದೆ. ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ ಮುಖ್ಯಸ್ಥೆ ಮುಪ್ತಿ ಕೂಡ ಜಮ್ಮು ಸರ್ವಾಧಿಕಾರದ ವಿರುದ್ಧ ತಿರುಗಿ ಬಿದ್ದಿದ್ದಾರೆ.
ಜಮ್ಮು-ಕಾಶ್ಮೀರದ ವಿಚಾರದಲ್ಲಿ ಕೇಂದ್ರ ಸರ್ಕಾರ ಈ ರೀತಿ ನಡೆದುಕೊಳ್ಳುತ್ತಿರುವುದು ಸರಿ ಅಲ್ಲ ಎಂದು ಹೇಳಿದ್ದಾರೆ.