ಬೆಂಗಳೂರು (26-02-2021): ಬಿಜೆಪಿ ಸಚಿವರ ಕಾರ್ಯಶೈಲಿಗೆ ಸ್ವತಃ ಬಿಜೆಪಿ ಶಾಸಕರೇ ಗರಂ ಆಗುತ್ತಿದ್ದಾರೆ. ಆರೋಗ್ಯ ಸಚಿವ.ಡಾ. ಸುಧಾಕರ್ ತಮ್ಮ ಕ್ಚೇತ್ರದ ಯಾವುದೇ ಕೆಲಸಗಳನ್ನು ಮಾಡುತ್ತಿಲ್ಲ ಎಂದು ಅವರ ಆಪ್ತ ಕಾರ್ಯದರ್ಶಿಗೆ ಶಾಸಕ ರೇಣುಕಾಚಾರ್ಯ ತರಾಟೆಗೆ ತೆಗೆದುಕೊಂಡಿದ್ದಾರೆ.
ಸುಧಾಕರ್ ಆಪ್ತ ಕಾರ್ಯದರ್ಶಿಗೆ ರೇಣುಕಾಚಾರ್ಯ ದೂರವಾಣಿ ಕರೆ ಮಾಡಿ, ಹತ್ತಾರು ಬಾರಿ ಭೇಟಿ ಮಾಡಿದರು ನಿಮ್ಮ ಸಚಿವರು ಕೆಲಸ ಮಾಡುತ್ತಿಲ್ಲ. ಶುಕ್ರವಾರ ಮಧ್ಯಾಹ್ನದ ಒಳಗೆ ನನ್ನ ಕೆಲಸ ಆಗದಿದ್ದರೆ, ಇನ್ನೊಂದು ಮುಖ ತೋರಿಸಬೇಕಾಗುತ್ತದೆ ಎಂದು ಧಮಕಿ ಹಾಕಿದ್ದಾರೆ.
ಸುಧಾಕರ್ ವಿರುದ್ಧ ಕಿಡಿಕಾರಿದ ರೇಣುಕಾಚಾರ್ಯ ನನ್ನ ಕೆಲಸ ಮಾಡಿಕೊಡದಿದ್ದರೆ ಶುಕ್ರವಾರ ಗಾಂಧಿ ಪ್ರತಿಮೆ ಎದುರು ಸಚಿವರ ವಿರುದ್ಧ ಧರಣಿ ಕುಳಿತುಕೊಳ್ಳುವುದಾಗಿ ಹೇಳಿದ್ದಾರೆ.