ಬೆಂಗಳೂರು(01-10-2020): ವಿಧಾನ ಪರಿಷತ್ ನ ಪದವೀಧರ ಕ್ಷೇತ್ರಗಳಿಗೆ ನಡೆಯುವ ಚುನಾವಣೆಗೆ ಜೆಡಿಎಸ್ ತಮ್ಮ ಅಭ್ಯರ್ಥಿಗಳನ್ನು ಘೋಷಿಸಿದೆ.
ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಆರ್ ಚೌಡರೆಡ್ಡಿ, ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಶಿವಶಂಕರ ಕಲ್ಲೂರ, ಈಶಾನ್ಯ ಶಿಕ್ಷಕರ ಕ್ಷೇತ್ರಕ್ಕೆ S ತಿಮ್ಮಯ್ಯ ಪುರ್ಲೆ ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಎ.ಪಿ.ರಂಗನಾಥ್ ಅವರನ್ನು ಅಭ್ಯರ್ಥಿಗಳಾಗಿ ಕಣಕ್ಕೆ ಇಳಿಸಿ ಜೆಡಿಎಸ್ ಪಟ್ಟಿ ಬಿಡುಗಡೆ ಮಾಡಿದೆ.
ಅಕ್ಟೋಬರ್ 28ರಂದು ವಿಧಾನ ಪರಿಷತ್ ಚುನಾವಣೆಯನ್ನು ನಿನ್ನೆಯಷ್ಟೇ ಕೇಂದ್ರ ಚುನಾವಣಾ ಆಯೋಗ ಘೋಷಿಸಿತ್ತು.