ವಿಜಯಪುರ(12-02-2022): ವೃದ್ಧನ ಕಿವಿ ಕತ್ತರಿಸಿ ಭೀಕರವಾಗಿ ಹತ್ಯೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ರಾಂಪೂರ ಪಿಎ ಗ್ರಾಮದಲ್ಲಿ ನಡೆದಿದೆ.
ಮಡಿವಾಳಪ್ಪ ಭೀಮರಾಯ್ ಎಂಬವರನ್ನು ಪೈಶಾಚಿಕವಾಗಿ ಹತ್ಯೆ ಮಾಡಲಾಗಿದೆ.
ದುಷ್ಕರ್ಮಿಗಳು ಬಲಗಡೆಯ ಕಿವಿ ಕತ್ತರಿಸಿ ಚಿನ್ನ ಎಗರಿಸಿ ಪರಾರಿಯಾಗಿದ್ದಾರೆ.
ಈ ಕುರಿತು ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇಸ್ ದಾಖಲಾಗಿದೆ.
